ಹರಿ ಕಥಾಮೃತ ಸಾರ | Hari Kathamruta Saara | Sri Ananth Kulkarni | Haridasa Habba 2014
Vocals: Sri. Ananth Kulkarni
Harmonium: Sri. Ravindra Katoti
Tabla: Sri. Rajagopala Kallurkar
Tabla: Sri. Roopak Kallurkar
Taala: Sri. Venkatesh Purohit
Taala: Sri. Amit
Support Vocals: Sri Shashi Kumar
Пікірлер: 22
ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು|| ಶ್ರೀರಮಣಿ ಕರಕಮಲ ಪೂಜಿತ ಚಾರುಚರಣ ಸರೋಜ ಬ್ರಹ್ಮ ಸಮೀರವಾಣಿ ಫಣೀಂದ್ರವೀಂದ್ರ ಭವ ಇಂದ್ರ ಮುಖ ವಿನುತ ನೀರಜಭವಾಂಡ ಉದಯ ಸ್ಥಿತಿ ಕಾರಣನೆ ಕೈವಲ್ಯದಾಯಕ ನಾರಸಿಂಹನೆ ನಮಿಪೆ ಕರುಣಿಪುದು ಎಮಗೆ ಮಂಗಳವ||1|| ಜಗದುದರನ ಅತಿ ವಿಮಲ ಗುಣರೂಪಗಳನು ಆಲೋಚನದಿ ಭಾರತ ನಿಗಮತತಿಗಳ ಅತಿಕ್ರಮಿಸಿ ಕ್ರಿಯಾ ವಿಶೇಷಗಳ ಬಗೆಬಗೆಯ ನೂತನವ ಕಾಣುತ ಮಿಗೆ ಹರುಷದಿಂ ಪೊಗಳಿ ಹಿಗ್ಗುವ ತ್ರಿಗುಣಮಾನಿ ಮಹಾಲಕುಮಿ ಸಂತೈಸಲಿ ಅನುದಿನವು||2|| ನಿರುಪಮಾನಂದಾತ್ಮ ಭವ ನಿರ್ಜರ ಸಭಾಸಂಸೇವ್ಯ ಋಜುಗಣದ ಅರಸೆ ಸತ್ವಪ್ರಚುರ ವಾಣೀಮುಖಸರೋಜೇನ ಗರುಡ ಶೇಷ ಶಶಾಂಕದಳ ಶೇಖರರ ಜನಕ ಜಗದ್ಗುರುವೇ ತ್ವಚ್ಚರಣಗಳಿಗೆ ಅಭಿವಂದಿಸುವೆ ಪಾಲಿಪುದು ಸನ್ಮತಿಯ||3|| Advertisements REPORT THIS AD ಆರುಮೂರೆರೆಡೊoದು ಸಾವಿರ ಮೂರೆರೆಡು ಶತಶ್ವಾಸ ಜಪಗಳ ಮೂರು ವಿಧ ಜೀವರೊಳಗೆ ಅಬ್ಜಜಕಲ್ಪ ಪರಿಯಂತ ತಾ ರಚಿಸಿ ಸತ್ವರಿಗೆ ಸುಖ ಸಂಸಾರ ಮಿಶ್ರರಿಗೆ ಅಧಮಜನರಿಗೆ ಅಪಾರ ದುಃಖಗಳ ಈವ ಗುರು ಪವಮಾನ ಸಲಹೆಮ್ಮ||4|| ಚತುರವದನನ ರಾಣಿ ಅತಿರೋಹಿತ ವಿಮಲಾ ವಿಜ್ಞಾನಿ ನಿಗಮ ಪ್ರತತಿಗಳಿಗಭಿಮಾನಿ ವೀಣಾಪಾಣಿ ಬ್ರಹ್ಮಾಣಿ ನತಿಸಿ ಬೇಡುವೆ ಜನನಿ ಲಕ್ಷ್ಮೀಪತಿಯ ಗುಣಗಳ ತುತಿಪುದಕೆ ಸನ್ಮತಿಯ ಪಾಲಿಸಿ ನೆಲೆಸು ನೀ ಮದ್ವದನ ಸದನದಲಿ||5|| ಕೃತಿರಮಣ ಪ್ರದ್ಯುಮ್ನನಂದನೆ ಚತುರವಿಂಶತಿ ದೇವತೆಗಳಿಗೆ ಗುರುವೆನಿಸುತಿಹ ಮಾರುತನ ನಿಜಪತ್ನಿ ಸತತ ಹರಿಯಲಿ ಗುರುಗಳಲಿ ಸದ್ಗತಿಯ ಪಾಲಿಸಿ ಭಾಗವತ ಭಾರತ ಪುರಾಣ ರಹಸ್ಯ ತತ್ವಗಳು ಅರುಪು ಕರುಣದಲಿ ||6|| ವೇದಪೀಠ ವಿರಿಂಚಿ ಭವ ಶುಕ್ರ ಆದಿಸುರ ವಿಜ್ಞಾನದಾಯಕ ಮೋದ ಚಿನ್ಮಯ ಗಾತ್ರ ಲೋಕಪವಿತ್ರ ಸುಚರಿತ್ರ ಛೇದ ಭೇದ ವಿಷಾದ ಕುಟಿಲಾಂತಾದಿ ಮಧ್ಯ ವಿದೂರ ಆದಾನಾದಿ ಕಾರಣ ಬಾದರಾಯಣ ಪಾಹಿ ಸತ್ರಾಣ||7|| ಕ್ಷಿತಿಯೊಳಗೆ ಮಣಿಮಂತ ಮೊದಲಾದ ಅತಿ ದುರಾತ್ಮರು ಒಂದಧಿಕ ವಿಂಶತಿ ಕುಭಾಷ್ಯವ ರಚಿಸೆ ನಡುಮನೆಯೆಂಬ ಬ್ರಾಹ್ಮಣನ ಸತಿಯ ಜಠರದೊಳು ಅವತರಿಸಿ ಭಾರತೀರಮಣ ಮಧ್ವಭಿದಾನದಿ ಚತುರದಶ ಲೋಕದಲಿ ಮೆರೆದ ಅಪ್ರತಿಮಗೆ ವಂದಿಸುವೆ||8|| ಪಂಚಭೇದಾತ್ಮಕ ಪ್ರಪಂಚಕೆ ಪಂಚರೂಪಾತ್ಮಕನೆ ದೈವಕ ಪಂಚಮುಖ ಶಕ್ರಾದಿಗಳು ಕಿಂಕರರು ಶ್ರೀಹರಿಗೆ ಪಂಚವಿಂಶತಿ ತತ್ವ ತರತಮ ಪಂಚಿಕೆಗಳನು ಪೇಳ್ದ ಭಾವೀ ವಿರಿಂಚಿಯೆನಿಪ ಆನಂದತೀರ್ಥರ ನೆನೆವೆನನುದಿನವು||9|| ವಾಮದೇವ ವಿರಿಂಚಿತನಯ ಉಮಾಮನೋಹರ ಉಗ್ರ ಧೂರ್ಜಟಿ ಸಾಮಜಾಜಿನ ವಸನಭೂಷಣ ಸುಮನಸೋತ್ತಂಸ ಕಾಮಹರ ಕೈಲಾಸ ಮಂದಿರ ಸೋಮಸೂರ್ಯಾನಲ ವಿಲೋಚನ ಕಾಮಿತಪ್ರದ ಕರುಣಿಸೆಮಗೆ ಸದಾ ಸುಮಂಗಲವ||10|| ಕೃತ್ತಿವಾಸನೆ ಹಿಂದೆ ನೀ ನಾಲ್ವತ್ತು ಕಲ್ಪಸಮೀರನಲಿ ಶಿಷ್ಯತ್ವವಹಿಸಿ ಅಖಿಳ ಆಗಮಾರ್ಥಗಳೋದಿ ಜಲಧಿಯೊಳು ಹತ್ತು ಕಲ್ಪದಿ ತಪವಗೈದು ಆದಿತ್ಯರೊಳಗೆ ಉತ್ತಮನೆನಿಸಿ ಪುರುಷೋತ್ತಮನ ಪರಿಯಂಕ ಪದವೈದಿದೆಯೋ ಮಹದೇವ||11|| ಪಾಕಶಾಸನ ಮುಖ್ಯ ಸಕಲ ದಿವೌಕಸರಿಗೆ ಅಭಿನಮಿಪೆ ಋಷಿಗಳಿಗೆ ಏಕಚಿತ್ತದಿ ಪಿತೃಗಳಿಗೆ ಗಂಧರ್ವ ಕ್ಷಿತಿಪರಿಗೆ ಆ ಕಮಲನಾಭದಿ ಯತಿಗಳಾನೀಕಕಾನಮಿಸುವೆನು ಬಿಡದೆ ರಮಾಕಳತ್ರನ ದಾಸವರ್ಗಕೆ ನಮಿಪೆನು ಅನವರತ||12|| ಪರಿಮಳವು ಸುಮನದೊಳಗೆ ಅನಲನು ಅರಣಿಯೊಳಗೆ ಇಪ್ಪಂತೆ ದಾಮೋದರನು ಬ್ರಹ್ಮಾದಿಗಳ ಮನದಲಿ ತೋರಿತೋರದಲೆ ಇರುತಿಹ ಜಗನ್ನಾಥ ವಿಠಲನ ಕರುಣ ಪಡೆವ ಮುಮುಕ್ಷುಜೀವರು ಪರಮ ಭಾಗವತರನು ಕೊಂಡಾಡುವುದು ಪ್ರತಿದಿನವು||13|| ||ಇತಿ ಶ್ರೀ ಮಂಗಳಾಚರಣ ಸಂಧಿ ಸಂಪೂರ್ಣಂ||
Hearty Congratulations on receiving Rajyotsava Award. We are very happy about it.
Namaste
🙏🙏🙏
ಹರಿಕಥಾ ಮೃತ ಸಾರಹಾಡು ತುಂಬಾ ಚೆನ್ನಾಗಿದೆ
Sri Hari..Namo Namaha
Thank you 🙏🏿🌄🙏🏿🙏🏿🙏🏿🙏🏿
Gurugalakaruneellarigulabisali.Hareasrinivasa
Very beautiful
Utube is best
Very nice.
Thankyou sir,🙏
Very nice
😊
SUPER
@chidambarwalvekar95
3 жыл бұрын
Super
@rameshonkar2759
3 жыл бұрын
@@chidambarwalvekar95 llj
How to get all harikathamruthasara sandhi's mp3
E
By
🙏🙏🚩🚩🌹
👌👌👏👏🙏🙏